Kendasampige

Kendasampige ಕೆಂಡಸಂಪಿಗೆ ಎಂಬುದು ಕನ್ನಡ ಅಂತರ್ಜಾಲ ಲೋಕ

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ.

ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ

್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ.

ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ.

ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.

01/02/2025

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎಂಟನೆಯ ಕಂತು ನಿಮ್ಮ ಓದಿಗೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

01/02/2025

ಬೇರಿನಿಂದ ಬೆಳಕಿಗೆ: ಮಿತ್ರಾ ವೆಂಕಟ್ರಾಜ ಅನುವಾದಿತ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

‘ಒಂದು ಪುರಾತನ ನೆಲದಲ್ಲಿʼ ಕೃತಿ ಭಾರತ ಮತ್ತು ಈಜಿಪ್ಟ್‌ನಂತಹ ಎರಡು ಪುರಾತನ ನೆಲದ ಸಂಸ್ಕೃತಿಯ ತಾಯಿ ಬೇರುಗಳ ಸಂಶೋಧನೆಯ ಅತ್ಯುನ್ನತ ದಾಖಲೆಯಾಗಿದೆ. ಕಳೆದ ಆರು ಶತಮಾನಗಳಿಂದ ವಿಸ್ಮೃತಿಯೆಡೆಗೆ ದಾಪುಗಾಲಿಡುತ್ತಿರುವ ಕಡಲ ತೀರದ ಕೆಲವು ಮುಖ್ಯ ವ್ಯಾಪಾರ ಕೇಂದ್ರಗಳಲ್ಲಿನ, ಜನಜೀವನದ, ಸಾಂಸ್ಕೃತಿಕ ಸಾಮಾಜಿಕ ಬದುಕಿನ ಚಿತ್ರಣವನ್ನು ಪಾತ್ರಗಳ ಮೂಲಕ ಕಟ್ಟಿಕೊಡುವ ಇಲ್ಲಿನ ಕ್ರಮ ವಿನೂತನವಾಗಿದೆ.
ಹಿರಿಯ ಕಾದಂಬರಿಕಾರ್ತಿ ಮಿತ್ರಾ ವೆಂಕಟರಾಜ್ ಅನುವಾದಿಸಿರುವ ‘ಒಂದು ಪುರಾತನ ನೆಲದಲ್ಲಿʼ ಕಾದಂಬರಿಯ ಕುರಿತು ದೇವಿಕಾ ನಾಗೇಶ್‌ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

31/01/2025

ವ್ಯಕ್ತಿತ್ವಗಳ ಮುಖವಾಡ ಕಳಚುವ ಅವಳ ಕಣ್ಣಿನ ಕಥೆ: ರಾಮ್‌ಪ್ರಕಾಶ್‌ ರೈ ಸರಣಿ

ಇಲ್ಲಿ ಕ್ರೈಮ್ ಇದ್ದರೂ, ಅನ್ಯಾಯವಿದ್ದರೂ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಯುಕ್ತಿಯೊಂದರ ಶಕ್ತಿಯಿಂದ ಆರಕ್ಷಕರು, ಕ್ರಮಬದ್ಧ ತನಿಖೆ ಎಲ್ಲವ ಮೀರಿಸಿ ಬೇಧಿಸುವ ಹಾದಿಯೇ ಬಲು ರೋಮಾಂಚಕ. ಕಥನ ಕಟ್ಟುವಿಕೆಯೂ ಈ ದಾರಿಗೆ ಹಾದಿಗಲ್ಲಿನಂತೆ ಪೂರಕವಾಗಿಯೇ ಇದೆ. ಅದು ಮಾತ್ರವಲ್ಲದೆ, ಪ್ರಿಯಾಳನ್ನು ಸೂಪರ್ ಹ್ಯೂಮನ್ ಎಂದೋ, ಅತಿಮಾನುಷ ಶಕ್ತಿ ಉಳ್ಳವಳು ಎಂಬಂತೆ ಬಿಂಬಿಸದೆ ಸಾಮಾನ್ಯ ಮಹಿಳೆಯೊಬ್ಬಳಂತೆ ತೋರಿಸಿದ್ದು, ಕಥನಕ್ಕೆ ಪ್ರಾಮಾಣಿಕ ಸ್ಪರ್ಶವನ್ನು ನೀಡಿದೆ ಮತ್ತು ಅದು ತೀರಾ ನೈಜವಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಸೂಕ್ಷ್ಮ ದರ್ಶಿನಿ’ ಸಿನಿಮಾದ ವಿಶ್ಲೇಷಣೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

30/01/2025

ಅಂಡಮಾನ್-ನಿಕೋಬಾರ್ ದ್ವೀಪಗಳ ಅನುಭವಗಳು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಪೋರ್ಟ್ ಬ್ಲೇರ್ ನಿಲ್ದಾಣದಲ್ಲಿ ಇಳಿದು ಹೊರಕ್ಕೆ ಬರುತ್ತಿದ್ದಂತೆ ಹಾರಾಡುತ್ತ ಬಂದ ಮೋಡಗಳು ಸಣ್ಣದಾಗಿ ಮಳೆ ಹನಿಯತೊಡಗಿದವು. ಇಬ್ಬರೂ ಓಡೋಡಿ ಹೋಗಿ ನಿಲ್ದಾಣದ ಒಳಕ್ಕೆ ಸೇರಿಕೊಂಡೆವು. ವಿಮಾನ ಮತ್ತು ವಿಮಾನ ನಿಲ್ದಾಣದ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಜನರು ಕೆಲವೇ ಕ್ಷಣಗಳಲ್ಲಿ ತೊಯ್ದು ತೊಪ್ಪೆಯಾಗಿದ್ದರು. ಪ್ಲೆಕಾರ್ಡ್ ಇಟ್ಟುಕೊಂಡು ನಮಗಾಗಿ ಕಾಯುತ್ತಿದ್ದ ಚಾಲಕನನ್ನು ಗುರುತಿಸಿ ಕಾರಿನಲ್ಲಿ ಹೋಟೆಲ್ ಸೇರಿಕೊಂಡೆವು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

30/01/2025

ರೂಪಾ ಹಾಸನ ಬರೆದ ಈ ದಿನದ ಕವಿತೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

29/01/2025

ಮಂತ್ರುಕ್ಕೆ ಮಾವಿನ್ ಕಾಯೂ ಉದುರ್ತೈತೆ: ಸುಮಾ ಸತೀಶ್ ಸರಣಿ

ಊಟ ಸೇರ್ದಿದ್ರೆ, ಉಸಾರು ತಪ್ಪೀರೆ ದಿಷ್ಟಿ ಮಂತ್ರ ಹಾಕೋರು. ಇದ್ರಾಗೆ ನಾಕು ತರ. ಸೆರಗು ನಿವಾಳ್ಸಿಕಂತಾ ಮಂತ್ರ ಹಾಕೋದು ಒಂದು ರಕಮಾದ್ರೆ, ಇಬೂತಿ(ವಿಭೂತಿ), ಸಕ್ಕರೆ, ಉಪ್ಪು ಮಂತ್ರಿಸಿ ಕೊಡೋದು ಬ್ಯಾರೆ ರಕಮುಗ್ಳು. ಅವ್ರೇ ಬಂದ್ರೆ ಸೆರಗು ನಿವಾಳ್ಸಿ ಮಂತ್ರ ಹಾಕೋರು. ಅವುರ್ ಬದ್ಲಿ ಬ್ಯಾರೆಯೋರ್ ಬಂದ್ರೆ ಉಪ್ಪೋ ಸಕ್ಕರೇನೋ ಮಂತ್ರಿಸಿ ಊಟದಾಗೆ ಕಲ್ಸಿ ಕೊಡೋಕೆ ಹೇಳೋರು. ಇಬೂತಿ ಆದ್ರೆ ಹಣೆ ಮ್ಯಾಗೆ ಹಚ್ಚೋಕೆ‌ ಹೇಳೋರು. ಮಂತ್ರ ಬಿದ್ದ ಮ್ಯಾಕೆ ಊಟ ತಿಂಡಿ ಸರ್ಯಾಗಿ ಸೇರೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಲೇಖಕರ ಅಜ್ಜಿ-ಅಜ್ಜಂದಿರು ಹಾಕುತ್ತಿದ್ದ ಅಂತ್ರ-ಮಂತ್ರಗಳ ಕುರಿತ ಬರಹ ನಿಮ್ಮ ಓದಿಗೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

29/01/2025

‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

28/01/2025

ಜೀವಶಾಸ್ತ್ರದಲ್ಲಿ ಸ್ಕೋರ್ ಮಾಡಿಸಿದ ಕೈಬೆರಳ ತಂತ್ರ!! ಬಸವನಗೌಡ ಹೆಬ್ಬಳಗೆರೆ‌ ಸರಣಿ

ಊರಲ್ಲಿ ಫಲಿತಾಂಶ ಕೇಳಿ ಏನೂ ಹೇಳಲಿಲ್ಲ. “ವಿಜ್ಞಾನವೆಂದರೆ ಕಷ್ಟ; ಅಂತಾದ್ರಲ್ಲಿ ನೀನು ಇಷ್ಟಾದ್ರೂ ತೆಗೆದೆಯಲ್ಲಾ ಅಂತಾ ಖುಷಿ ಪಟ್ಟರು”! ಅವರು ನನ್ನ ಫಲಿತಾಂಶದಲ್ಲಿ ಬೇಸರ ಪಟ್ಟುಕೊಳ್ಳದಿರಲು ಇನ್ನೊಂದು ಕಾರಣವಿದೆ. ಅವರಿಗೆ ನನ್ನ ಹಾಸ್ಟೆಲ್ ಹುಡುಗರ ಫಲಿತಾಂಶ ಹೇಳಿದ್ದು. ನಮ್ಮ ಹಾಸ್ಟೆಲ್ಲಿನಲ್ಲಿ ಇದ್ದ ಸೆಕಂಡ್ ಪಿಯುಸಿಯ 24 ವಿದ್ಯಾರ್ಥಿಗಳ ಪೈಕಿ ಪಾಸ್ ಆಗಿದ್ದು ಇಬ್ಬರೇ!! ಅದು ನಾನು ಮತ್ತು ಲಿಂಗರಾಜ ಮಾತ್ರ. ಅದರಲ್ಲೂ ಹಾಸ್ಟೆಲ್ಲಿಗೆ ಅತೀ ಹೆಚ್ಚು ಅಂಕ ನನ್ನವೇ ಆಗಿದ್ದವು!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

28/01/2025

ಚಂದ್ರಮತಿ ಸೋಂದಾ ಬರೆದ ಈ ದಿನದ ಕವಿತೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

28/01/2025

ಆವರಣ ಭಂಗ ಮಾಡಿಸುವ “ಪರಿಸರದ ಒಡನಾಟ”: ನಾರಾಯಣ ಯಾಜಿ ಬರಹ

ದಟ್ಟಕಾಡು ಮರೆಯಾಗಿ ಕರಾವಳಿಯ ಬಯಲಿಗೆ ತೆರೆದುಕೊಳ್ಳುವ ಮಧ್ಯದ ಕೊಂಡಿಯಾಗಿ ಇರುವ ಊರುಗಳ ಹೆಸರುಗಳಾದ ಹರನ ಗುಡ್ಡ, ಚೇರ್ಕಿ, ಚೋರಾಡಿ, ಹಾಲಾಡಿ, ಹಕ್ಲಾಡೀ, ಕಬ್ಬಿನಾಲೆಗಳ ವಿವರ ಲೇಖನಗಳುದ್ದಕ್ಕೂ ಬರುತ್ತಲೇ ಹೋಗುತ್ತವೆ. ಯಾವುದೋ ಕಾಲದಲ್ಲಿ ‘ಮುದ್ದಳ’ ಎನ್ನುವ ಸಾಮಂತನಾಳಿದ ಈ ಊರಿನಲ್ಲಿ ಆತನ ನೆನಪು ಮರೆಯಾಗಿದೆ. ಆತನ ಅರಮನೆ ಇದೆ ಎನ್ನುವ ಜಾಗ ಅಸ್ಪಷ್ಟವಾಗಿ ಇದೆ. ಹಳ್ಳಿಗರ ಭಿತ್ತಿಯಲ್ಲಿ ಮಾಸಲು ತೊಡಗಿರುವ ಆ ಗುತ್ತುಗಳ ವಿಚಾರವನ್ನು ಹೇಳುತ್ತಲೇ, ತನ್ನ ಬಾಲ್ಯದ ಪರಿಸರದಲ್ಲಿ ಇದೀಗ ಮರೆಯಾಗುತ್ತಿರುವ ಹಳೆಯ ಕಾಡು, ಕರಡ ಹುಲ್ಲಿನ ಬೇಣ, ಒಳ್ಳೆ ಹಾವು, ವಿಷದ ಹಾವುಗಳೊಡನೆಯ ಬದುಕೆಲ್ಲವನ್ನೂ ಆಧುನಿಕ ಬದುಕು, ನಿಧಾನಕ್ಕೆ ಕಸಿಯತೊಡಗಿವೆ ಎನ್ನುವ ನೋವನ್ನು ಪರೋಕ್ಷವಾಗಿ ಲೇಖಕರು ತೋಡಿಕೊಳ್ಳುತ್ತಿದ್ದಾರೆ.
ಶಶಿಧರ ಹಾಲಾಡಿಯವರ “ಪರಿಸರದ ಒಡನಾಟ”ಕೃತಿಯ ಕುರಿತು ನಾರಾಯಣ ಯಾಜಿ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

27/01/2025

“ಧೈರ್ಯಶಾಲಿ ಮತ್ತು ಬಂಡಾಯಗಾರ ಅರಬ್ ಕವಿ”: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅಡೋನೀಸ್ ಅವರ ಕಾವ್ಯ ಮತ್ತು ವಿಮರ್ಶೆ ಅರೇಬಿಕ್ ಕಾವ್ಯದ ಬೆಳವಣಿಗೆಯ ಮೇಲೆ ದೂರಗಾಮಿ ಪ್ರಭಾವ ಬೀರಿವೆ. ಶಾಸ್ತ್ರೀಯ ಕಾವ್ಯದಲ್ಲಿ ಆಳವಾಗಿ ಬೇರೂರಿದ್ದಾಗ್ಯೂ ಸಮಕಾಲೀನ ಅರೇಬಿಕ್ ಸಮಾಜದ ಅವಸ್ಥೆ ಮತ್ತು ಪ್ರತಿಕ್ರಿಯೆಗಳನ್ನು ತೋರಿಸುವಂತಹ ಹೊಸ ಕಾವ್ಯಾತ್ಮಕ ಭಾಷೆ ಮತ್ತು ಲಯಗಳನ್ನು ಸೃಷ್ಟಿಸಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸಿರಿಯಾ (Syria) ದೇಶದ ಅರೇಬಿಕ್ (Arabic) ಭಾಷಾ ಕವಿ ಅಡೋನೀಸ್-ರವರ (Adonis – Ali Ahmad Said Esber) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

27/01/2025

ವೈದ್ಯರ ಬದುಕಿನ ಪಡಿಪಾಟಲ ಕನ್ನಡಿ: ಕೊಟ್ರೇಶ್ ಅರಸೀಕೆರೆ ಬರಹ

ಇಡೀ ಕಾದಂಬರಿ, ಒಬ್ಬ ಪ್ರಾಮಾಣಿಕ ವೈದ್ಯ ದೇಶ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿದ್ದಾಗಲೂ ಹೇಗೆ ಭ್ರಷ್ಟ ವ್ಯವಸ್ಥೆಗೆ ಬಲಿಯಾಗುತ್ತಾನೆ ಎನ್ನುವ ಕರಾಳ ಕಥನ. ಕೋವಿಡ್ ಕಾಲದಲ್ಲಿ ಸರ್ಕಾರದ ವ್ಯವಸ್ಥೆ ಮೇಲೆ ಆ ಸಮಯದಲ್ಲಿ ಚಾಲ್ತಿಯಲ್ಲಿದ್ದ ಶ್ರೀ ಸಾಮಾನ್ಯನ ಎಲ್ಲ ಆರೋಪಗಳೂ ಸತ್ಯವೆಂದು ಬಿಂಬಿಸುತ್ತದೆ. ವೈದ್ಯಕೀಯ ವ್ಯವಸ್ಥೆಯ ಭ್ರಷ್ಟತೆ ಹೇಗೆ ಲಕ್ಷಾಂತರ ಜನರ ಜೀವನ, ಜೀವದ ಜತೆ ಆಟವಾಡಿದ ಕರಾಳ ಕಥೆಯೇ ಈ ಕಾದಂಬರಿ.
ಡಾ. ಲಕ್ಷ್ಮಣ ವಿ.ಎ. ಕಾದಂಬರಿ ‘ಪಿ. ಎಚ್. ಸಿ ಕವಲುಗುಡ್ಡ’ ಕುರಿತು ಕೊಟ್ರೇಶ್ ಅರಸೀಕೆರೆ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

26/01/2025

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ

ಹಾಲುಸೇವೆ ಮುಗಿಸಿಕೊಂಡು ಗೋಪಾಲಿ ನಾಗೇನಹಳ್ಳಿಗೆ ಮರಳುತ್ತಾನೆ ಎಂದು ನಂಬಿಕೆಯೇ ಇಟ್ಟುಕೊಂಡಿರದ ಜನಕ್ಕೆ ಆಗಬಾರದಷ್ಟು ನಿರಾಶೆಯಾಯಿತು. ‘ಇಂಥ ಪಾಖಂಡಿಯೊಬ್ಬ ಹಾಲುಸೇವೆ ಮಾಡಿ ಮರಳಿಬರುತ್ತಾನೆ ಅಂದರೆ ಅದರರ್ಥ ಏನು?’ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಏಕಕಾಲಕ್ಕೆ ಮೂಡಿತು. ಸತ್ಯವಂತದೇವರಾದ ನಾಗಲಿಂಗಸ್ವಾಮಿ ಗೋಪಾಲಿಯಂಥ ಅಪವಿತ್ರ ದೇಹಿಯಿಂದ ಸ್ಪರ್ಷಕ್ಕೆ ಒಳಗಾಗಿ ಅದ್ಹೇಗೆ ಪರಿಣಾಮ ತೋರಿಸಲಿಲ್ಲ? ಸಾಯುವ ಘಳಿಗೆಯಲ್ಲಿ ಗುರುಶಾಂತಯ್ಯನವರು ಹಾಗೇಕೆ ಎಚ್ಚರಿಸುವ ದನಿಯಲ್ಲಿ, ಶಾಪ ಹಾಕುವ ರೀತಿಯಲ್ಲಿ ನುಡಿದರು? ಅದೆಲ್ಲ ತಾವು ನಂಬಿಕೊಂಡು ಬಂದಿದ್ದನ್ನು ಜನರ ಮೇಲೆ ಹೇರುವ ಪ್ರಯತ್ನವಿರಬಹುದೇ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ “ಹಾಲುಸೇವೆ” ನಿಮ್ಮ ಓದಿಗೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

25/01/2025

ಭಾರತೀಯ-ಬ್ರಿಟಿಷ್ ಸಂಧಿಯಾದ ಸೆಂಚುರಿ ಕ್ಲಬ್: ವಿನತೆ ಶರ್ಮ ಅಂಕಣ

ನಾನು ಇದನ್ನೆಲ್ಲಾ ಕಲ್ಪಿಸಿಕೊಳ್ಳುತ್ತಾ ನಡೆದಾಡುತ್ತಾ, ಫೋಟೋಗಳನ್ನ ತೆಗೆಯುತ್ತಾ ಇತಿಹಾಸದ ಕಾಲಘಟ್ಟಗಳಲ್ಲಿ ಕಳೆದುಹೋಗಲು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದೆ. ಅತ್ತ ಕಡೆ ನನ್ನ ಗಂಡ, ‘ನಾವಿಲ್ಲಿ ಕೂತಿದ್ದು, ಅಲ್ಲಿ ಆ ಲಾನ್‌ನಲ್ಲಿ ಒಂದು ಆನೆ ಕುಟುಂಬ ಓಡಾಡುತ್ತಿದ್ದಾರೆ ಎಷ್ಟು ಚೆನ್ನ, ಅಲ್ವಾ’ ಎಂದರು. ನನ್ನ ಬ್ರಿಟಿಷ್ ಗಂಡನ ಮಾತು ಕೊಲೊನಿಯಲ್ ಟೈಮ್ಸ್ ಕಲ್ಪನೆಗಳಲ್ಲಿ ಮುಳುಗಿದ್ದ ನನ್ನ ಭಾರತೀಯ ಮನಸ್ಸನ್ನು ತಾಕಿತ್ತು. ಆ ಕ್ಷಣದಲ್ಲಿ ಅಲ್ಲೊಂದು ಭಾರತೀಯ-ಬ್ರಿಟಿಷ್ ಸಂಧಿ-ಸಮಾಗಮವಾಗಿತ್ತು. ಖಂಡಿಸಬೇಕೊ, ನಗಬೇಕೊ ತಿಳಿಯದೇ ಕಕ್ಕಾಬಿಕ್ಕಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

25/01/2025

ಮನುಷ್ಯನ ಪ್ರಸ್ತಾಪನೆ ದೇವರ ನಿರಾಕರಣೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ ಅವಳನ್ನು ತಬ್ಬಿಕೊಂಡು ಮಲಗೇ ಇದ್ದನು. ಸೆಲ್ವಿ, “ಇದಕ್ಕೆ ನಾನು, ನಿನ್ನನ್ನು ಹತ್ತಿರಕ್ಕೆ ಸೇರಿಸ್ತಾಇರಲಿಲ್ಲ” ಎಂದಳು. ಆದರೆ ಅವನು ಅವಳನ್ನು ಬಿಡಲಿಲ್ಲ. ಸೆಲ್ವಿ ಮಣಿಯಿಂದ ಬಿಡಿಸಿಕೊಳ್ಳಲು ಹರಸಾಹಸ ಮಾಡಬೇಕಾಯಿತು. ಸೆಲ್ವಿ ಮತ್ತೆ, “ನಿನ್ನನ್ನ ಮನೆಗೆ ಸೇರಿಸಿಕೊಂಡಿದ್ದೆ ತಪ್ಪಾಯಿತು” ಎಂದು ಅವನಿಂದ ಬಿಡಿಸಿಕೊಂಡು ಎದ್ದು ಬಾಗಿಲನ್ನು ನಿಧಾನವಾಗಿ ತೆರೆದು ಹೊರಕ್ಕೆ ನೋಡಿದಳು. ಆಕಾಶದಲ್ಲಿ ನಕ್ಷತ್ರಗಳು ಹೊಳೆಯುತ್ತಿದ್ದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಏಳನೆಯ ಕಂತು ನಿಮ್ಮ ಓದಿಗೆ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

24/01/2025

ಅಕ್ಕಮಹಾದೇವಿ ಮತ್ತು ಗೂಗಲ್ ಗುರು: ಎಲ್.ಜಿ.ಮೀರಾ ಅಂಕಣ

ಬದಲಾವಣೆಗಳಾಗುತ್ತಿರುವುದು ಕೇವಲ ಹೆಂಗಸರ ಬದುಕಿನಲ್ಲಲ್ಲ. ಕಳೆದ ಮೂವತ್ತು – ಮೂವತ್ತೈದು ವರ್ಷಗಳಲ್ಲಿ ಬದುಕಿನ ಎಲ್ಲ ಆಯಾಮಗಳಲ್ಲೂ ಪ್ರಾದೇಶಿಕ ಮತ್ತು ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳಾಗಿವೆ. ನಮ್ಮ ಕುಟುಂಬ ವ್ಯವಸ್ಥೆ ಸಹ ಈ ಬದಲಾವಣೆಗಳಿಗೆ ಹೊರತಾಗಿಲ್ಲ. ಹೊಸಹೊಸ ರೀತಿಯ ಆರೋಗ್ಯ ಸಮಸ್ಯೆಗಳು, ಜೀವನಶೈಲಿಯ ಕಾಯಿಲೆಗಳು, ಒಟ್ಟುಕುಟುಂಬಗಳಿರಲಿ, ಬೀಜಕೇಂದ್ರ ಕುಟುಂಬಗಳೇ(ನ್ಯೂಕ್ಲಿಯರ್ ಫ್ಯಾಮಿಲಿ ಎನ್ನುವ ಅರ್ಥದಲ್ಲಿ) ಒಡೆದು ಹೊಸ ರೀತಿಯ ಸಹಜೀವನದ ವ್ಯವಸ್ಥೆಗಳು ಉಗಮವಾಗಿವೆ. ನಮ್ಮ ಯುವತಿಯರು ಯುವಕರು `ಆಯ್ಕೆ ಮಾಡಿಕೊಂಡ ಕುಟುಂಬ’(ಚೋಸನ್ ಫ್ಯಾಮಿಲಿ) ಎಂಬ ಹೊಸ ಪರಿಕಲ್ಪನೆಯನ್ನು ನಮಗೆ ಪರಿಚಯಿಸಿದ್ದಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹನ್ನೊಂದನೆಯ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

24/01/2025

ಲೋನ್‌ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ

ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು… ಇಂತಹ ಹಲವು ನೂರು ಆಸೆಗಳನ್ನು ಪೂರೈಸಬಹುದು…. ಅಂತ ಕನಸು ಕಾಣುತ್ತಾ ಇದ್ದೆನಾ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

23/01/2025

ನೀರ ನೆಲದ ಮೇಲೆ ನೂರಾರು ಮನೆ – ಧೊದಿಯಾ: ಹೇಮಾ ನಾಯಕ ಬರಹ
ಹೀಗೆ ನೆಲದಿಂದ ಎತ್ತರಿಸಿ ಕಟ್ಟಿದ ಚಿಕ್ಕ ಚಿಕ್ಕ ಗೂಡುಗಳು ಅಲ್ಲಲ್ಲಿ ಚದುರಿಕೊಂಡಂತೆ ಇದ್ದು, ನೀರೇ ಬುಡಕ್ಕೆ ಕೈ ಹಾಕಿ ಎಬ್ಬಿಸಿ ಕೂರಿಸಿದಂತೆ ಕಾಣಿಸುತ್ತವೆ. ಹೆಚ್ಚುಕಮ್ಮಿ ಎಲ್ಲ ತೊಳೆದುಕೊಂಡು ಹೋಗುವಂತೆ ಕಾಣುತ್ತಿದ್ದ ಊರಿನಲ್ಲಿ, ಅಟ್ಟದ ಕೋಣೆಗಳಿಗೆ ಹೊಂದಿಕೊಂಡಂತೆ ಹೂವಿನ ಕುಂಡಗಳನ್ನು ಸುಂದರವಾಗಿ ಜೋಡಿಸಿದ್ದು ನೋಡಿ ಅಚ್ಚರಿಯ ಜೊತೆ ಖುಷಿಯೂ ಆಯಿತು. ಧೊದಿಯಾದಲ್ಲಿ ಒಂದೇ ಒಂದು ಕಿರಾಣಿ ಅಂಗಡಿಯಿದೆ. ಅದರ ಮಾಲೀಕ ನನ್ನನ್ನು ಕರೆದು ತನ್ನ ಮೊಟ್ಟಮೊದಲ ಅಂಗಡಿ ಅದೋ ಅಲ್ಲಿಯೇ ಇತ್ತೆಂದು ದಿಬ್ರು ನದಿಯ ನಡುವೆ ಕಾಣದ ಯಾವುದೋ ಬಿಂದುವಿನತ್ತ ಬೆರಳು ತೋರಿಸಿದ.
ಅಸ್ಸಾಮ್ ರಾಜ್ಯದ ಧೊದಿಯಾ ಹಳ್ಳಿಗೆ ನೀಡಿದ ಭೇಟಿಯ ಕುರಿತು ಹೇಮಾ ನಾಯಕ ಬರಹ

This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.

Address


Alerts

Be the first to know and let us send you an email when Kendasampige posts news and promotions. Your email address will not be used for any other purpose, and you can unsubscribe at any time.

Contact The Business

Send a message to Kendasampige:

Shortcuts

  • Address
  • Alerts
  • Contact The Business
  • Claim ownership or report listing
  • Want your business to be the top-listed Media Company?

Share

Our Story

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ. ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ. ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ. ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.