29/12/2023
https://youtu.be/NPCf3murTEY?si=ZZmyaqXh5iMaPVZ8
*ಪ್ರಭಾವತಿ ಪಾತ್ರಧಾರಿಯಾಗಿ ಸಿನಿಮಾದಲ್ಲಿ ಆರಾಧನಾ ಪ್ರಭೆ ಹೇಗಿದೆ?*
*ಮಚ್ಚಿನ ಕಿಚ್ಚಿನ ಜೊತೆ ಡಿಬಾಸ್ ಕೆಚ್ಚು*
*ಮತ್ತೆ ಮ್ಯಾಜಿಕ್ ಮಾಡ್ತಾ ದರ್ಶನ್ & ತರುಣ್ ಜೋಡಿ?*
ದರ್ಶನ್ ವಿಭಿ...
dedicated to CINEMA
https://youtu.be/NPCf3murTEY?si=ZZmyaqXh5iMaPVZ8
*ಪ್ರಭಾವತಿ ಪಾತ್ರಧಾರಿಯಾಗಿ ಸಿನಿಮಾದಲ್ಲಿ ಆರಾಧನಾ ಪ್ರಭೆ ಹೇಗಿದೆ?*
*ಮಚ್ಚಿನ ಕಿಚ್ಚಿನ ಜೊತೆ ಡಿಬಾಸ್ ಕೆಚ್ಚು*
*ಮತ್ತೆ ಮ್ಯಾಜಿಕ್ ಮಾಡ್ತಾ ದರ್ಶನ್ & ತರುಣ್ ಜೋಡಿ?*
ದರ್ಶನ್ ವಿಭಿ...
ಸಿದ್ದೇಶ್ವರ ಜೆಪಿ ನಗರ
KAATERA NA CRAZE🔥🕺💪
Mysore Kaatera na celebration🕺🕺♥️
Darshan Thoogudeepa Srinivas
ಬೇರೆ ಭಾಷೆಯ ಸಿನಿಮಾ ರಂಗಕ್ಕೂ.. ನಮಗೂ ಇರೋ difference ಇದೇ ಇರಬೇಕು..
ಅಷ್ಟು ದೊಡ್ಡ superstar, ಅಭಿಮಾನಿಗಳ ಸುಲ್ತಾನ್... ಆದರೂ Posterಗೆ frame ಹಾಕುವ ಕನಿಷ್ಠ ವ್ಯವಧಾನವಿಲ್ಲ.... ಛೇ!!
DBoss Darshan Thoogudeepa Srinivas Darshan fans club TUMKUR
ಆತ್ಮತಲ್ಲಣ ಹಾರರ್ ರಿವೆಂಜ್ ಕಥೆ
ಯುವನಟ ಆದಿಕೇಶವ ರೆಡ್ಡಿ ನಟನೆಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿದ ಆತ್ಮ ತಲ್ಲಣ ಚಿತ್ರವು ಇದೇ ಶುಕ್ರವಾರ ಡಿ.೨೯ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಯಿತು. ಎಸ್.ಪಿ. ಕೃಷ್ಣ ಅವರು ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆ ಶ್ರೀ ಯೋಗಮಾತಾ ಹುಲಿಯಮ್ಮದೇವಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಸಹ ಮಾಡಿದ್ದಾರೆ. ಆದಿಕೇಶವರೆಡ್ಡಿ ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಲಾವಣ್ಯ ಅಭಿನಯಿಸಿದ್ದಾರೆ,
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಕೃಷ್ಣಪ್ಪ ನಾವು ಈ ಚಿತ್ರವನ್ನು ಶುರು ಮಾಡಿ ೩ ವರ್ಷಗಳಾಯಿತು, ಶೂಟಿಂಗ್ ಟೈಮಲ್ಲಿ ಹಲವಾರು ಅವಘಡಗಳು ನಡೆದವು, ತೊಂದರೆಗಳು ಎದುರಾದವು, ೪೦ ದಿನಗಳ ಕಾಲ ಮೈಸೂರು, ಗೋಪಾಲಪುರದ ಸುತ್ತ ಮುತ್ತ ಚಿತ್ರದ ಚಿತ್ರೀಕರಣ ಮಾಡಿದ್ದೇವೆ, ಒಂದಷ್ಟು ರಿಯಲ್ ಇನ್ಸಿಡೆಂಟ್ ಇಟ್ಟುಕೊಂಡು ಸಿನಿಮ್ಯಾಟಿಕ್ ಆಗಿ ಚಿತ್ರವನ್ನು ಮಾಡಿದ್ದೇವೆ. ಅತ್ಯಾಚಾರಕ್ಕೊಳಗಾದ ಹೆಣ್ಣಿನ ರಿವೆಂಜ್ ಕಥೆಯೇ ಆತ್ಮತಲ್ಲಣ. ಸಿನಿಮಾ ಬಿಡುಗಡೆಯ ಹಂತಕ್ಕೆ ಬರಲು ನಾಯಕನ ಸಹಕಾರ ದೊಡ್ಡದು ಎಂದರು,
ನಂತರ ನಾಯಕ ಆದಿಕೇಶವರೆಡ್ಡಿ ಮಾತನಾಡುತ್ತ ನಾನು ಓದಿದ್ದು ಮುಳುಬಾಗಿಲಲ್ಲೇ. ಚಿಕ್ಕವನಿದ್ದಾಗಿನಿಂದ ಸಿನಿಮಾದಲ್ಲಿ ಆಕ್ಟಿಂಗ್ ಮಾಡಬೇಕೆಂಬ ಆಸೆಯಿತ್ತು. ತಮಿಳಲ್ಲಿ ಜತಿನ್-೨ ಅಲ್ಲದೆ ಕನ್ನಡದ ವಿಚಾರಣೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ, ಚಿತ್ರದಲ್ಲಿ ಬಡ ರೈತ ಕುಟುಂಬದ ಯುವಕನಾಗಿ ಕಾಣಿಸಿಕೊಂಡಿದ್ದು, ದೇಶಸೇವೆ ಮಾಡಲೆಂದು ಮಿಲಿಟರಿ ಸೇರಿಕೊಳ್ಳುತ್ತೇನೆ. ನಿಧಿಯ ಆಸೆಗಾಗಿ ನನ್ನ ತಂದೆ ತಾಯಿ, ಹೆಂಡತಿಯನ್ನು ದುರುಳರು ಸಾಯಿಸಿ, ಆಕೆಯನ್ನು ಜೀವಂತವಾಗಿ ಹೂತಿರುತ್ತಾರೆ. ಮುಂದೆ ಏನಾಗುತ್ತದೆ ಅನ್ನುವುದೇ ಆತ್ಮತಲ್ಲಣ ಕಥೆ. ಚಿತ್ರ ಕೊನೆಯವರೆಗೂ ಕುತೂಹಲ ಹುಟ್ಟುಹಾಕುತ್ತಲೇ ಸಾಗುತ್ತದೆ ಎಂದರು.
ಆದಿಕೇಶವರೆಡ್ಡಿ, ಲಾವಣ್ಯ, ಕೃಷ್ಣಪ್ಪ, ಮುನಿ, ರೋಹಿತ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ಶ್ರೀನಿ ಕೊಪ್ಪ ಅವರ ಸಂಗೀತ ಸಂಯೋಜನೆ, ಸದಾಶಿವ ಅವರ ಛಾಯಾಗ್ರಹಣ, ರೋಲ್ಕಟ್ ಮೀಡಿಯಾ ಹೌಸ್ ಸಂಕಲನ, ಜಾಕಿ ಸೋಮು ಅವರ ಸಾಹಸ, ಜಗ್ಗು ಮಾಸ್ಟರ್ ಅವರ ನೃತ್ಯನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಚಿತ್ರವು ಯು/ಎ ಪ್ರಮಾಣ ಪಡೆದುಕೊಂಡಿದೆ.
*"ರಂಗಸಮುದ್ರ"ಕ್ಕೆ ಬಾಹುಬಲಿಯ ಬಲ*
*"ರಂಗಸಮುದ್ರ" ಚಿತ್ರಕ್ಕೆ ಬಾಹುಬಲಿ & RRR ಸಂಗೀತ ನಿರ್ದೇಶಕ ಎಮ್ ಎಮ್ ಕೀರವಾಣಿ ಸಾಥ್* ...
ಹೊಸ ವರ್ಷದ ಮೊದಲ ಮಾಸದಂದು ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ರೆಟ್ರೋ ಮೂವಿ ರಂಗಸಮುದ್ರ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೆ ಚಿತ್ರದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ..
ಈಗ ಭಾರತದ ಮುಂಚೂಣಿಯಲ್ಲಿರುವ ಮ್ಯೂಸಿಕ್ ಡೈರೆಕ್ಟರ್, ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ಬಾಹುಬಲಿ ಹಾಗೂ ಆರ್.ಆರ್.ಆರ್ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ ಅವರಿಂದ ಚಿತ್ರದಲ್ಲಿ ತಿರುವು ಪಡೆಯುವ ಅದ್ಭುತ ಗೀತೆಯೊಂದನ್ನು ಹಾಡಿಸಿ ಗೀತೆಯನ್ನು ಬಿಡುಗಡೆಗೆಗೊಳಿಸಿದೆ.
ಹೌದು ಭಾರತದ ಎಮ್.ಎಮ್ ಕೀರವಾಣಿಯವರು ಹಲವು ದಶಕಗಳ ನಂತರ "ರಂಗಸಮುದ್ರ" ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಗೀತೆಯೊಂದಕ್ಕೆ ದನಿಯಾಗಿರುವುದು ಚಿತ್ರತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ. ಅರ್ಥಾತ್ ಬಾಹುಬಲಿ ಸಂಗೀತ ಮಾಂತ್ರಿಕನ ಬಲ ಸಿಕ್ಕಾಂತಾಗಿದೆ ಎನ್ನುವುದು ಈಗಾಗಲೆ ಗಾಂಧಿನಗರದಲ್ಲಿ ಪ್ರಸ್ತುತ ಪರಸ್ಪರ ಪಿಸುಮಾತಗುತ್ತಿರುವ ಸುದ್ದಿ.
ರಂಗಸಮುದ್ರ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್ ಚನ್ನಗಿರಿ ಹಾಗೂ ಸಂಗೀತ ನಿರ್ದೇಶಕ ದೇಸಿ ಮೋಹನ್ ರವರು ಈ ಒಂದು ಗೀತೆಗೆ ಎಮ್ ಎಮ್ ಕೀರಾವಣಿಯವರೆ ದನಿಯಾಗಬೇಕು ಎಂದು ಚಿತ್ರದ ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಬಳಿ ಹೇಳಿಕೊಂಡಿದ್ದರಂತೆ. ಚಿತ್ರತಂಡದ ಆಸೆಯಂತೆ ನಿರ್ಮಾಪಕರು ಕೀರವಾಣಿ ಅವರನ್ನು ಸಂಪರ್ಕಿಸಿದಾಗ ಪ್ರೀತಿಯಿಂದ ಹೈದಾರಬಾದ್ ಗೆ ಆಹ್ವಾನಿಸಿದರು ಎಂದಿದ್ದಾರೆ.
ಸಾಂಗ್ ಅನ್ನು ಒಮ್ಮೆ ಕೇಳಿದ ನಂತರ, ನಾನು ಸೀನಿಯರ್ ಎಂಬುದನ್ನು ಬದಿಗಿಟ್ಟು , ಚಿತ್ರದ ಕಥೆ ಹೇಳಿ ಎಂದು ನಗುತ್ತ ಡೈರೆಕ್ಟರ್ ಗೆ ಹೇಳಿದ್ದಾರೆ ಕಥೆ ಕೇಳಿದ 5 ನಿಮಿಷಕ್ಕೆ ಹಾಡಲು ಒಪ್ಪಿದರು ಎನ್ನುತ್ತಾರೆ ನಿರ್ದೇಶಕ ರಾಜಕುಮಾರ್ ಅಸ್ಕಿ..
ಇನ್ನು ಹಾಡಲು ಸಿದ್ದರಾಗುವಾಗ ಗೀತೆಯನ್ನು ಕನ್ನಡದಲ್ಲೆ ಬರೆದುಕೊಂಡು, ಬಹಳ ಸುಮಧುರ ವಾಗಿ ಹಾಡಿ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಸಾಬೀತುಪಡಿಸಿರುವುದು ಹೆಮ್ಮೆಯ ಸಂಗತಿ..
ಸರಿಸುಮಾರು ಅರ್ಧ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತ ಕುಳಿತ ಎಮ್ ಎಮ್ ಕೀರವಾಣಿಯವರು, ಅವರ ಮತ್ತು ಕನ್ನಡ ನಂಟು ಹಾಗೂ ಬೆಂಗಳೂರಿನಲ್ಲಿ ಒಂದು ಚಿಕ್ಕ ರೂಮಿನಲ್ಲಿ ವಾಸ ಮಾಡುತ್ತಿದ್ದದ್ದು, ಚಾಮುಂಡೇಶ್ವರಿ ಸ್ಟುಡಿಯೋ ಇಂದ ತನ್ನ ಸಿನಿಪಯಣ ಶುರುವಾಗಿದ್ದು. ನನ್ನ ಆಪ್ತ ಸ್ನೇಹಿತ ದೊಡ್ಡಣ್ಣ ಎನ್ನುತ್ತಾ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರದ ಶೂಟಿಂಗ್ ಬಗ್ಗೆ ಮಾತನಾಡುತ್ತಾ ಅಪ್ಪುರವರು ನಟಿಸಬೇಕಿದ್ದ ಸಿನಿಮಾ ರಂಗಸಮುದ್ರ ಎಂದು ತಿಳಿದಾಗ ಭಾವುಕರಾಗಿ, ಅಪ್ಪು ಒಬ್ಬ ಅಜಾತಶತ್ರು ಈಗ ನಕ್ಷತ್ರವಾಗಿ ಮಿನುಗುತ್ತಿದ್ದಾರೆ, ಒಬ್ಬರು ಸತ್ತರೆ ಶತ್ರುಗು ಕೂಡ ಕಣ್ಣಿರು ಬರಬೇಕು ಅದರಂತೆಯೆ ಈ ಸಾಂಗ್ ನೋಡಿದ ಮೇಲೆ ಎಂತಹ ಕಲ್ಲು ಮನಸ್ಸು ಕೂಡ ಕರಗುತ್ತೆ ಎಂದಿದ್ದಾರೆ..
ಚಿತ್ರವನ್ನು ನಿರ್ಮಾಣ ಮಾಡಿದ ಹೊಯ್ಸಳರವರ ಹೆಗಲ ಮೇಲೆ ಕೈ ಹಾಕಿ ಆಭಯ ನೀಡುವುದರ ಜೊತೆಗೆ, ಕಥೆ ರಚಿಸಿದ ಡೈರೆಕ್ಟರ್ ರಾಜ್ ಕುಮಾರ್ ಅಸ್ಕಿ ಮತ್ತು ಅತ್ಯುತ್ತಮ ಸಾಹಿತ್ಯ ನೀಡಿರುವ ವಾಗೀಶ್ ಚನ್ನಗಿರಿ ಅವರ ಬೆನ್ನು ತಟ್ಟಿ ರಾಜಮೌಳಿಯೊಂದಿಗೆ ನಿಮ್ಮ ಸಿನಿಮಾ ನೋಡುತ್ತೇನೆ ಎಂದು, ಅತಿಥಿಗಳಿಗೆ ಅವರೇ ಎಲ್ಲಾ ರೀತಿಯಲ್ಲೂ ಸತ್ಕರಿಸಿ ಬೀಳ್ಕೊಟ್ಟರು ಎನ್ನುತ್ತಾರೆ ಚಿತ್ರತಂಡದವರು...
ರಂಗಸಮುದ್ರ ರಾಘವೇಂದ್ರ ರಾಜ್ ಕುಮಾರ್, ರಂಗಾಯಣ ರಘು, ಸಂಪತ್ ರಾಜ್,ದಿವಂಗತ ಮೋಹನ್ ಜುನೇಜಾ, ಮೂಗು ಸುರೇಶ್, ಗುರುರಾಜ್ ಹೊಸಕೋಟೆ,,ಉಗ್ರಂ ಮಂಜು,, ಕಾರ್ತಿಕ್ ರಾವ್, ದಿವ್ಯ ಗೌಡ,,ಮಹೇಂದ್ರ, ಸ್ಕಂದ ಅವರ ತಾರಾ ಬಳಗವನ್ನು ಹೊಂದಿದೆ..
ಚಿತ್ರದಲ್ಲಿರುವ ೪ ಗೀತೆಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ,ದೇಸಿ ಮೋಹನ್ ಅವರು ದನಿಯಾಗಿದ್ದರೆ, ಚಿತ್ರದಲ್ಲಿ ಎರಡು ಬಿಟ್ ಗಳಿಗೆ ನವೀನ್ ಸಜ್ಜು ರವರು ದನಿಯಾಗಿದ್ದಾರೆ.
ರೆಟ್ರೋ ಕಥಾ ಹಂದರದ ಈ ಸಿನಿಮಾ, ಪ್ರೇಕ್ಷಕರ ಮನಸ್ಸನ್ನು ಗೆಲ್ಲಲು ಎಲ್ಲಾ ರೀತಿಯ ಸಿದ್ದತೆಯೊಂದಿಗೆ ಜನವರಿ 12ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಿದ್ದವಾಗಿದೆ.
𝐖𝐡𝐞𝐫𝐞 𝐢𝐭 𝐚𝐥𝐥 𝐬𝐭𝐚𝐫𝐭𝐞𝐝…..
It's gonna be MASSIVE 💥
in cinemas 22nd December
ಡಾ ಶಿವರಾಜ್ ಕುಮಾರ್ ಅವರು ನಂದಿನಿ ಹಾಲು ಹಾಗೂ ಅದರ ಉತ್ಪನ್ನ ಆಹಾರಗಳ ರಾಯಭಾರಿಯಾದರು
*ಕುತೂಹಲ ಮೂಡಿಸಿದೆ "chef ಚಿದಂಬರ" ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್* .
ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ "ರಾಘು" ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ "chef ಚಿದಂಬರ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ಅವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನಿಧಿ ಅವರ ಪೋಸ್ಟರ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರ ಏನು ಎಂಬುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ದೇಶಕ ಆನಂದರಾಜ್.
ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, "ವಿಕ್ರಾಂತ್ ರೋಣ" ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ "ಲವ್ ಮಾಕ್ಟೇಲ್" ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು "chef ಚಿದಂಬರ" ಚಿತ್ರದ ತಾರಾಬಳಗದಲ್ಲಿದ್ದಾರೆ.
*ಕುತೂಹಲ ಮೂಡಿಸಿದೆ "chef ಚಿದಂಬರ" ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್* .
ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ "ರಾಘು" ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ "chef ಚಿದಂಬರ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ಅವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನಿಧಿ ಅವರ ಪೋಸ್ಟರ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರ ಏನು ಎಂಬುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ದೇಶಕ ಆನಂದರಾಜ್.
ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, "ವಿಕ್ರಾಂತ್ ರೋಣ" ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ "ಲವ್ ಮಾಕ್ಟೇಲ್" ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು "chef ಚಿದಂಬರ" ಚಿತ್ರದ ತಾರಾಬಳಗದಲ್ಲಿದ್ದಾರೆ.
*"X&Y" ಚಲನೆ ಶುರು*
ಸತ್ಯ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಇತ್ತೀಚಿಗೆ ಮುಹೂರ್ತ ಕಂಡ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ನಿರ್ದೇಶಕ ಡಿ.ಸತ್ಯಪ್ರಕಾಶ್ ನಿರ್ದೇಶನದ "X&Y" ಚಿತ್ರದ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಡಿಸೆಂಬರ್ 21 ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಿರುವ ಚಿತ್ರತಂಡ, ಫ್ಯಾಂಟಸಿ ಮತ್ತು ಭಾವನಾತ್ಮಕ ದೃಶ್ಯಗಳಿಂದ "X&Y" ಪ್ರೇಕ್ಷಕರನ್ನು ತೇಲಿಸಲಿದೆ ಎನ್ನುತ್ತಾರೆ ನಿರ್ದೇಶಕ ಡಿ.ಸತ್ಯಪ್ರಕಾಶ್.
ಒಂದು ತಿಂಗಳು ಶೂಟಿಂಗ್ ಮುಗಿಸಿ, ಹೊಸವರ್ಷದ ಫೆಬ್ರವರಿಯಲ್ಲಿ ಮಂಗಳೂರಿಗೆ ಪ್ರಯಾಣ ಬೆಳಸಲಿದೆ.
"X&Y" ಹೊಸ ಚಿತ್ರದಲ್ಲಿ ಸತ್ಯಪ್ರಕಾಶ್ ಮತ್ತು ಅಥರ್ವ ಪ್ರಕಾಶ್ ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಬಿ.ಎಸ್ ಕೆಂಪರಾಜ್ ಸಂಕಲನವಿದ್ದು, ವರದರಾಜ್ ಕಾಮತ್ ಕಲಾ ನಿರ್ದೇಶನ ಮಾಡುತ್ತಿದ್ದಾರೆ.
worldwide grand release on December 22nd!
*ಸೂಪರ್ ಹೀರೋ ‘ಹನುಮಾನ್’ ಸಿನಿಮಾದ ಮೊದಲ ನೋಟ ರಿಲೀಸ್..ಕನ್ನಡದಲ್ಲಿಯೂ ಬಂತು ಟ್ರೇಲರ್*
ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟ್ರೇಲರ್ ಝಲಕ್ ಮೂಲಕ ಪ್ರೇಕ್ಷಕರೆದುರು ಸೂಪರ್ ಹೀರೋ 'ಹನುಮಾನ್' ದರ್ಶನ ಕೊಟ್ಟಿದ್ದಾರೆ.
ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ತೇಜ ಸಜ್ಜ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟ್ರೇಲರ್ ನೋಡಿದಾಗಲೇ ತಿಳಿದು ಬರುತ್ತೆ. ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಟ್ರೇಲರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜ ಲುಕ್, ಚಿತ್ರದ ಮೇಕಿಂಗ್, ಕ್ಯಾಮೆರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿದೆ.
ಯಥೋ ಧರ್ಮ ತತೋ ಹನುಮಾ... ಯಥೋ ಹನುಮ ತತೋ ಜಯ... (ಎಲ್ಲಿ ಸದಾಚಾರವಿದೆಯೋ ಅಲ್ಲಿ ಹನುಮಂತನು, ಮತ್ತು ಎಲ್ಲಿ ಹನುಮಂತ ಇದ್ದಾನೋ ಅಲ್ಲಿ ಜಯವಿದೆ ಎಂಬ ಡೈಲಾಗ್ ಮೂಲಕ ಹನುಮಾನ್ ಪ್ರಪಂಚನ್ನು ಪರಿಚಯಿಸಲಾಗಿದೆ. ಅಂಜನಾದ್ರಿ ಬೆಟ್ಟ, ಹನುಮಾನ್ ಪ್ರತಿಮೆ ಟ್ರೇಲರ್ ಹೈಲೆಟ್ಸ್ ಗಳಲ್ಲೊಂದು.
ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ.
ಪ್ಯಾನ್ ವರ್ಲ್ಡ್ ಲೆವೆಲ್ ನಲ್ಲಿ ಹನುಮಾನ್ ಸಿನಿಮಾ ರಿಲೀಸ್ ಆಗ್ತಿದೆ. ಭಾರತೀಯ ವಿವಿಧ ಭಾಷೆಗಳಾದ ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಇಂಗ್ಲೀಷ್, ಸ್ಯಾನೀಶ್, ಚೈನೀಸ್, ಜಪಾನೀಸ್ ಮತ್ತು ಕೊರಿಯನ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಹಬ್ಬಕ್ಕೆ ವಿಶ್ವಾದ್ಯಂತ ಹನುಮಾನ್ ಸಿನಿಮಾದ ದರ್ಶನವಾಗಲಿದೆ.
ಸೂತ್ರಧಾರ ಯಾರು?
Be the first to know and let us send you an email when Movie Magix posts news and promotions. Your email address will not be used for any other purpose, and you can unsubscribe at any time.
Send a message to Movie Magix:
ಬೇರೆ ಭಾಷೆಯ ಸಿನಿಮಾ ರಂಗಕ್ಕೂ.. ನಮಗೂ ಇರೋ difference ಇದೇ ಇರಬೇಕು.. ಅಷ್ಟು ದೊಡ್ಡ superstar, ಅಭಿಮಾನಿಗಳ ಸುಲ್ತಾನ್... ಆದರೂ Posterಗೆ frame ಹಾಕುವ ಕನಿಷ್ಠ ವ್ಯವಧಾನವಿಲ್ಲ.... ಛೇ!! DBoss Darshan Thoogudeepa Srinivas Darshan fans club TUMKUR
*ಕುತೂಹಲ ಮೂಡಿಸಿದೆ "chef ಚಿದಂಬರ" ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್* . ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ "ರಾಘು" ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ "chef ಚಿದಂಬರ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ಅವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನಿಧಿ ಅವರ ಪೋಸ್ಟರ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರ ಏನು ಎಂಬುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ದೇಶಕ ಆನಂದರಾಜ್. ಡಾರ್ಕ್ ಕಾಮಿಡಿ ಜಾನರ್ ನ ಈ ಚಿ
Want your business to be the top-listed Media Company?