Coorg Buzz

Coorg Buzz ಕೊಡಗಿನ ಜನರ ಧ್ವನಿ
Coorg Day today updates

02/02/2025

ಕೊಡವಾಮೆ ಬಾಳೋ: ಕೊಡವರ ಬೃಹತ್ ಪಾದಯಾತ್ರೆಗೆ ಚಾಲನೆ*

ಕುಟ್ಟದಿಂದ ಕೊಡವಾಮೆ ಬಾಳೊ ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು ನಿರೀಕ್ಷೆಗೂ ಮೀರಿದ ಜನ ಸಾಗರ ಹರಿದು ಬಂದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕುಟ್ಟ ಬಸ್ ನಿಲ್ದಾಣದಲ್ಲಿ ಆರಂಭವಾದ ಪಾದಯಾತ್ರೆಯಲ್ಲಿ ಸುಮಾರು 2.5 ಕಿ ಮೀ ಉದ್ದದವರೆಗೆ ಕೊಡವ ಜನಾಂಗದವರು ನೆರೆದಿದ್ದಾರೆ.

ಸಾಂಪ್ರದಾಯಿಕ ಉಡುಪಿನಲ್ಲಿ ಕೊಡವರು ಹಾಗೂ ಕೊಡವ ಭಾಷಿಕರು.ಮಹಿಳೆ, ಮಕ್ಕಳು ಭಾಗಿಯಾಗಿದ್ದು, ಪಾದಯಾತ್ರೆಯು ಕುಟ್ಟದಿಂದ ಮಡಿಕೇರಿಯವರೆಗೆ 78 ಕಿಲೋಮೀಟರ್ ಕ್ರಮಿಸಲಿದೆ.
ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.

ಶ್ರೀ ಭಗಂಡೇಶ್ವರ, ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಅವರಿಂದ ವಿಶೇಷ ಪೂಜೆಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭ...
31/01/2025

ಶ್ರೀ ಭಗಂಡೇಶ್ವರ, ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಅವರಿಂದ ವಿಶೇಷ ಪೂಜೆ

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರಮುಖರು ಇದ್ದರು.

ಭಾಗಮಂಡಲದಲ್ಲಿ ಮೇಲ್ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಹೆಲಿಕಾಪ್ಟರ್ ಮೂಲಕ ಬಂದಿಳಿದ ಸಿಎಂ.ಉಸ್ತುವಾರಿ ಸಚಿವ ಬೋಸರಾಜ್ ಸಾಥ್ ಕೊಡ...
31/01/2025

ಭಾಗಮಂಡಲದಲ್ಲಿ ಮೇಲ್ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೆಲಿಕಾಪ್ಟರ್ ಮೂಲಕ ಬಂದಿಳಿದ ಸಿಎಂ.
ಉಸ್ತುವಾರಿ ಸಚಿವ ಬೋಸರಾಜ್ ಸಾಥ್
ಕೊಡಗಿನ ಶಾಸಕರಾದ ಎ. ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಅವರಿಂದ ಸಿದ್ದರಾಮಯ್ಯ ಅವರಿಗೆ ಸ್ವಾಗತ
ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿರುವ ಸಿದ್ದರಾಮಯ್ಯ.

ಕಟ್ಟೆಮಾಡು ಅರ್ಚಕರ ಮೇಲೆ ಹಲ್ಲೆ ಆರೋಪಿಗಳಿಗೆ ಸಹಕರಿಸಿದ ಇಬ್ಬರ ಬಂಧನ ಎರಡು ವಾಹನ ವಶ       ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆಜನವರಿ 27ರಂ...
31/01/2025

ಕಟ್ಟೆಮಾಡು ಅರ್ಚಕರ ಮೇಲೆ ಹಲ್ಲೆ ಆರೋಪಿಗಳಿಗೆ ಸಹಕರಿಸಿದ ಇಬ್ಬರ ಬಂಧನ ಎರಡು ವಾಹನ ವಶ

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ

ಜನವರಿ 27ರಂದು ಸಂಜೆ ಕಟ್ಟೆಮಾಡು ಮೃತ್ಯುಂಜಯ ದೇವಸ್ಥಾನದ ಅರ್ಚಕರಾದ ಶ್ರೀ ವಿಘ್ನೇಶ್ ಭಟ್ ಹಾಗೂ ಅವರ ತಾಯಿ ಗೀತಾ ( 76) ರವರ ಮೇಲೆ ಹಲ್ಲೆ ನಡೆದಿರುವ ಘಟನೆ ಕುರಿತು ತಲೆಮರಿಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಿದ್ದು ಮಡಿಕೇರಿ ಉಪ ವಿಭಾಗದ ಡಿ ವೈ ಎಸ್ ಪಿ ಸೂರಜ್ ಪಿ ಎ ರವರ ತಂಡ ತನಿಖೆ ಕೈಗೊಂಡು ಹಲ್ಲೆ ಮಾಡಿರುವ ಆರೋಪಿಗಳು ತಲೆಮರಿಸಿಕೊಳ್ಳಲು ಸಹಾಯ ಮಾಡಿರುವ ನೆಲ್ಲ ಮಕ್ಕಡ ಎಂ. ಶಿವಪ್ಪ ಕಾವಾಡಿ ಗ್ರಾಮ ವಿರಾಜಪೇಟೆ ಹಾಗೂ ಬೊಳ್ಯಪಂಡ ಎಂ ಭೀಮಯ್ಯ ಮೈತಾಡಿ ಗ್ರಾಮ ಇಬ್ಬರನ್ನು ಇಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಲಾದ ಮಾರುತಿ 800 ಕಾರು ಹಾಗೂ ಅಪರಾಧ ಕೃತ್ಯಕ್ಕೆ ಬಳಸಿದ ಬೋಲೇರೋ ವಾಹನವನ್ನು ಕಾಫಿ ತೋಟದಲ್ಲಿ ಬಚ್ಚಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿ ಅನಿಲ್ ಮತ್ತು ಸಹಚರರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.

ಆರೋಪಿಗಳಿಗೆ ತಲೆಮರಿಸಿಕೊಳ್ಳಲು ಯಾವುದೇ ರೀತಿಯಲ್ಲಿ ಸಹಾಯ ಮಾಡಿರುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ಅಥವಾ ಆರೋಪಿಗಳಿಗೆ ಸಹಾಯ ಮಾಡುವವರ ಕುರಿತು ಮಾಹಿತಿ ಒದಗಿಸುವಂತೆ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಕೋರಿಕೊಂಡಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಕಂಟ್ರೋಲ್ ರೂಂ 08272228330...9480804900 ಸಂಪರ್ಕಿಸಿ.

ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ ಪ್ರಕರಣ - ಆರೋಪಿಗಳ ಬಂಧನಕ್ಕೆ 2 ದಿನಗಳ ಗಡುವು ನೀಡಿದ ಬ್ರಾಹ್ಮಣ ಸಮಾಜಪೊಲೀಸ್ ವರಿಷ್ಟಾಧಿಕಾರಿ ಕೆ. ರಾ...
28/01/2025

ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ ಪ್ರಕರಣ - ಆರೋಪಿಗಳ ಬಂಧನಕ್ಕೆ 2 ದಿನಗಳ ಗಡುವು ನೀಡಿದ ಬ್ರಾಹ್ಮಣ ಸಮಾಜ

ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್, ಅವರಿಗೆ ಒತ್ತಾಯ ಪತ್ರ ಸಲ್ಲಿಕೆ

2 ದಿನಗಳೊಳಗಾಗಿ ಹಲ್ಲೆ ಮಾಡಿದ ಈವ೯ರು ಆರೋಪಿಗಳ ಬಂಧನವಾಗದೇ ಇದ್ದಲ್ಲಿ ಜನವರಿ 31 ರಂದು ಮಡಿಕೇರಿಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆಯ ಎಚ್ಚರಿಕೆ.

ಮಡಿಕೇರಿಯ ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಘ್ನೇಷ್ ಭಟ್ ಭೇಟಿಯಾಗಿ ಸಾಂತ್ವನ ಹೇಳಿದ ಬ್ರಾಹ್ಮಣ ಸಮಾಜದ ಪ್ರಮುಖರು.

28/01/2025

ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ

28/01/2025

ವಾಹನದ ಮಾಲೀಕರ ಗಮನಕ್ಕೆ

ವಿರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಊರ್ಜಿತ ದಾಖಲೆಗಳಿಲ್ಲದೆ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುವ ಸಂದರ್ಭದಲ್ಲಿ ಮೊಕದ್ದಮೆಯನ್ನು ದಾಖಲಿಸಿ ವಾಹನ ಮತ್ತು ಸ್ವತ್ತುಗಳನ್ನು ಸರ್ಕಾರದ ಪರ ಅಮಾನತ್ತುಪಡಿಸಿಕೊಂಡಿದ್ದು, ಈವರೆಗೂ ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ನ್ಯಾಯಾಲಯದಿಂದ ಹಲವಾರು ಬಾರಿ ನೋಟೀಸ್ಸು ಜಾರಿ ಮಾಡಿದರೂ ಸಹ ನ್ಯಾಯಾಲಯಕ್ಕೆ ವಾಹನ ಮಾಲೀಕರು ಹಾಜರಾಗಿರುವುದಿಲ್ಲ.
ಆದ್ದರಿಂದ ವಾಹನ ಸಂಖ್ಯೆ ಕೆಎ-12ಎಂ-5156, ಕೆಎ-12ಎಂ-860, ಕೆಎ.03-ಪಿ-5233, ಕೆಎ-04-1494, ಕೆಎ-12-2043, ಕೆಎಲ್.58-ಎಫ್-1595 ವಾಹನದ ನಿಜವಾದ ಮಾಲೀಕರು ಯಾರಾದರೂ ಇದ್ದಲ್ಲಿ, ವಾಹನದ ಮಾಲೀಕತ್ವವನ್ನು ರುಜುವಾತುಪಡಿಸಲು ನ್ಯಾಯವಾದಿಗಳ ಮುಖಾಂತರ ಅಥವಾ ಖುದ್ದಾಗಿ ಸಂಪೂರ್ಣ ದಾಖಲಾತಿಗಳೊಂದಿಗೆ ಈ ಪ್ರಕಟಣೆಯು ಪ್ರಕಟಗೊಂಡ 15 ದಿನಗಳೊಳಗಾಗಿ ತಮ್ಮ ಅಹವಾಲನ್ನು ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜಪೇಟೆ ವಿಭಾಗ, ವಿರಾಜಪೇಟೆ ಕಚೇರಿಗೆ ಸಲ್ಲಿಸಬೇಕಾಗಿದ್ದು, ಯಾವುದೇ ಅಹವಾಲು ಬಾರದಿದ್ದಲ್ಲಿ ಕರ್ನಾಟಕ ಅರಣ್ಯ ಕಾಯ್ದೆ, 1963 ರ ವಿಧಿ 71 (ಎ) ಯಿಂದ (ಜಿ) ಪ್ರಕಾರ ಈ ವಾಹನಗಳನ್ನು ಸರ್ಕಾರದ ಪರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 126ನೇ ಜನ್ಮ ದಿನಾಚರಣೆ          ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕೇಂದ್ರ ವತಿಯಿಂದ ಮಡಿ...
28/01/2025

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 126ನೇ ಜನ್ಮ ದಿನಾಚರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕೇಂದ್ರ ವತಿಯಿಂದ ಮಡಿಕೇರಿಯಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 126ನೇ ಹುಟ್ಟು ಹಬ್ಬ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ಜಿಲ್ಲಾ ಉಪ ಯೋಜನೆ ಸಮನ್ವಯಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲರಾದ ವಿಜಯ, ಪ್ರಾದೇಶಿಕ ಕೇಂದ್ರದ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

28/01/2025

ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಗೆ ಚಾಲನೆ

ದಿನಾಂಕ 26.01.2025 ರಂದು ಸಂಜೆ ಜಿಲ್ಲಾ ಪೊಲೀಸ್ ಮೈದಾನದಲ್ಲಿ ನಡೆದ ಭವ್ಯ ಹಾಗೂ ಅದ್ದೂರಿಯ ವರ್ಣರಂಜಿತ ಸಮಾರಂಭದಲ್ಲಿ “ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ “ ಗೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವೇದಿಕೆಯ ಮಹಾ ಪೋಷಕರು ಆದ ಕೆ. ರಾಮರಾಜನ್ ಅವರು ಅಧೀಕೃತ ಚಾಲನೆ ನೀಡಿದರು.

ವೇದಿಕೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾ ಕೆ.ಎಸ್ ಸುಂದರ್ ರಾಜ್, ಮುಖ್ಯ ಅಥಿತಿ ನಟಿ ಹರ್ಷಿಕಾ ಪೂಣಚ್ಚ, ಉದಯೋನ್ಮುಖ ನಟಿ ತೇಜಸ್ವಿನಿ, ಕಲಾ ಪೋಷಕರು ಹಾಗೂ ಶಕ್ತಿ ದಿನಪತ್ರಿಕೆಯ ಜಿ. ಚಿದ್ವಿಲಾಸ್,
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ
ಅಧ್ಯಕ್ಷಕರಾದ ಕೆ.ಕೆ. ನೌಶದ್, ಜೀ ಕನ್ನಡ ವಾಹಿನಿಯ ಕಂಟೆಸ್ಟೆಂಟ್ ಹೆಡ್ ಸಚಿನ್ ಪ್ರಕಾಶ್ ಕುಂದನಕೋಡಿ ಮುಂತಾದವರು ಭಾಗವಸಿದ್ದರು, ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಪೊಲೀಸರಿಂದ ಸಮೂಹ ಗೀತೆ, ರಸ ಮಂಜರಿ ಕಾರ್ಯಕ್ರಮ ಸೊಗಸಾಗಿ ಮೂಡಿಬಂದು ಪ್ರೇಕ್ಷಕರನ್ನು ರಂಜಿಸಿತು.

28/01/2025
27/01/2025

ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ

ಮೂರ್ನಾಡುವಿನಲ್ಲಿರುವ ಅರ್ಚಕರ ಮನೆಗೆ ಬಂದು ಹಲ್ಲೆ

ವಿಘ್ನೇಶ್ ಭಟ್ ಹಲ್ಲೆಗೊಳಗಾದ ಅರ್ಚಕ

ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರಾಗಿರುವ ವಿಘ್ನೇಷ್ ಭಟ್

ಮಡಿಕೇರಿ ಜಿಲ್ಲಾಸ್ಪತ್ರೆಗೆ ಗಾಯಾಳು ಅರ್ಚಕ ರವಾನೆ

ಇಂದು ಸಂಜೆ ನಡೆದ ಘಟನೆ

27/01/2025

*ಜ.28 ರಂದು ಉದ್ಯೋಗ ಮೇಳ*

ಮಡಿಕೇರಿ ಜ.27(ಕರ್ನಾಟಕ ವಾರ್ತೆ):-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ, 28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ತಾಮರ ರೆಸಾರ್ಟ್, ಕಕ್ಕಬ್ಬೆ, ಪೆಂಟಾಟೆಕ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಇಬ್ಬನಿ ರೆಸಾರ್ಟ್, ಮಡಿಕೇರಿ, ಅಪೋಲೋ ಫಾರ್ಮಸಿ ಬೆಂಗಳೂರು, ಹ್ಯೂಂಡಾಯಿ ಕಾರ್ ಶೋ ರೂಮ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ ಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್ ಇಲಾಖೆಯು, ಅವ್ಯಾಚ ಪದ ಬಳಸಿ ಸಂದೇಶ ಹಂಚಿಕೊಳ್ಳುವ ಮತ್ತು ಆತಂಕ ಸೃಷ್ಟಿಸುವ ವ್ಯಕ್ತಿಗಳ...
23/01/2025

ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್ ಇಲಾಖೆಯು,
ಅವ್ಯಾಚ ಪದ ಬಳಸಿ ಸಂದೇಶ ಹಂಚಿಕೊಳ್ಳುವ ಮತ್ತು ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯಿತ್ತಿದೆ.

22/01/2025

ತಿತಿಮತಿಯಲ್ಲಿ ಒಂಟಿ ಸಲಗವೊಂದರ ಪುಂಡಾಟಕ್ಕೆ ಭಯಭೀತರಾದ ಜನ

22/01/2025

ಚೆಪ್ಪುಡೀರ ಅರುಣ್ ಮಾಚಯ್ಯ ಮನೆಯ ವಠಾರದಲ್ಲಿ ಒಂಟಿ ಸಲಗ ಒಡಾಡುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆ.

ಶಾಂತಿ ದೂತ ದಲೈಲಾಮಾ ಭೇಟಿ ಮಾಡಿದ ಶಾಸಕ ಡಾ. ಮಂತರ್ ಗೌಡಬೈಲುಕುಪ್ಪೆ ಟಿಬೆಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೆಟಿಯನ್  ಸಮುದಾಯದ 14 ನೇ ಧರ್ಮಗುರ...
22/01/2025

ಶಾಂತಿ ದೂತ ದಲೈಲಾಮಾ ಭೇಟಿ ಮಾಡಿದ ಶಾಸಕ ಡಾ. ಮಂತರ್ ಗೌಡ

ಬೈಲುಕುಪ್ಪೆ ಟಿಬೆಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೆಟಿಯನ್ ಸಮುದಾಯದ 14 ನೇ ಧರ್ಮಗುರು ದಲೈಲಾಮಾ ಅವರನ್ನು ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ಪತ್ನಿ ದಿವ್ಯಾ ಮಂತರ್ ಜೊತೆ ಭೇಟಿ ಮಾಡಿ ಆಶೀರ್ವಾದ ಪಡೆದರು.ನಂತರದಲ್ಲಿ ವಿಶೇಷವಾದ ಕಾಫಿ ಹಾರವನ್ನು ಹಾಕುವ ಮೂಲಕ ದಲೈಲಾಮಾ ಅವರನ್ನು ಶಾಸಕರು ಗೌರವಿಸಿದರು.

ಮಡಿಕೇರಿ ಡಿ.ವೈ.ಎಸ್ಪಿ ಆಗಿ ಪೆಮ್ಮಂಡ ಎ. ಸೂರಜ್ ಅಧಿಕಾರ  ಸ್ವೀಕಾರಕೊಡಗು ಜಿಲ್ಲೆ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾಗಿ ಪಿ. ಎ. ಸೂರಜ...
21/01/2025

ಮಡಿಕೇರಿ ಡಿ.ವೈ.ಎಸ್ಪಿ ಆಗಿ ಪೆಮ್ಮಂಡ ಎ. ಸೂರಜ್ ಅಧಿಕಾರ ಸ್ವೀಕಾರ

ಕೊಡಗು ಜಿಲ್ಲೆ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾಗಿ ಪಿ. ಎ. ಸೂರಜ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದರು.
ಮೊದಲು ಚಾಮರಾಜನಗರ ಜಿಲ್ಲಾ ಗುಪ್ತವಾರ್ತೆ(ಇಂಟಲಿಜೆನ್ಸ್) ವಿಭಾಗದಲ್ಲಿ ಉಪ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುತಿದ್ದ ಇವರು ಮೂಲತಃ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನವರು

Address

Virajpet

Website

Alerts

Be the first to know and let us send you an email when Coorg Buzz posts news and promotions. Your email address will not be used for any other purpose, and you can unsubscribe at any time.

Contact The Business

Send a message to Coorg Buzz:

Videos

Share

Category